Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:23 - ಕನ್ನಡ ಸತ್ಯವೇದವು C.L. Bible (BSI)

23 ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್ ಇಸಾಕ್ ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಸಿ ಅವರಿಗೆ ದಯೆತೋರಿಸಿದನು; ಕರುಳು ಮರುಗಿದವನಾಗಿ ಅವರಿಗೆ ಪ್ರಸನ್ನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:23
36 ತಿಳಿವುಗಳ ಹೋಲಿಕೆ  

ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II


ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು.


ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.


ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.


ಸಿರಿಯಾದವರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗ ಬೆನ್ಹದದನು ಅರಸನಾದನು.


ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.


“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು