Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:4 - ಕನ್ನಡ ಸತ್ಯವೇದವು C.L. Bible (BSI)

4 ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 (ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಆತನು ಅವನ ಮೊರೆಯನ್ನು ಲಾಲಿಸಿ ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟ ಇಸ್ರಾಯೇಲ್ಯರ ಮೇಲೆ ಕಟಾಕ್ಷವಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಕೇಳಿ, ಅರಾಮ್ಯರ ರಾಜನಿಂದ ಬಾಧೆಗೆ ಒಳಗಾಗಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:4
22 ತಿಳಿವುಗಳ ಹೋಲಿಕೆ  

“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;


ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಸಿರಿಯಾದವರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಯೇಲರನ್ನು ಪೀಡಿಸುತ್ತಿದ್ದನು.


ಆಗ ಅವರು ಸರ್ವೇಶ್ವರನಿಗೆ, “ನಾವು ನಮ್ಮ ದೇವರಾದ ನಿಮ್ಮನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವೆ,” ಎಂದು ಮೊರೆಯಿಟ್ಟರು.


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ನಾವು ಈ ಕಾರಣ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಿದೆವು; ಅವರು ನಮಗೆ ಪ್ರಸನ್ನರಾದರು.


ಆತನನು ಪ್ರಾರ್ಥಿಸುವೆ, ಆತ ಆಲಿಸುವನು ತೀರಿಸುವೆ ಆತನಿಗೆ ನೀ ಹೊತ್ತ ಹರಕೆಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು