Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:5 - ಕನ್ನಡ ಸತ್ಯವೇದವು C.L. Bible (BSI)

5 ಅವನ ಮುಖಾಂತರವಾಗಿ ಅವರು ಸಿರಿಯಾದವರ ಕೈಯಿಂದ ಬಿಡುಗಡೆಯಾಗಿ, ಮುಂದಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಇವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮುಂಚಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:5
13 ತಿಳಿವುಗಳ ಹೋಲಿಕೆ  

ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ.


ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು.


ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ.


ಯೆಹೋವಾಹಾಜನ ಮಗ ಯೋವಾಷನು, ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು, ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ಪಡೆದನು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ಇವು ಈಜಿಪ್ಟ್ ದೇಶಕ್ಕೆ ಸರ್ವೇಶ್ವರ ಸ್ವಾಮಿಯ ಸಂಕೇತವಾಗಿಯೂ ಸಾಕ್ಷಿಯಾಗಿಯೂ ಇರುವುವು. ಅವರು ತಮ್ಮನ್ನು ಬಾಧಿಸುವವರ ವಿರುದ್ಧ ಸರ್ವೇಶ್ವರ ಸ್ವಾಮಿಗೆ ಮೊರೆಯಿಟ್ಟಾಗ, ಸ್ವಾಮಿಯು ವೀರನಾದ ರಕ್ಷಕನೊಬ್ಬನನ್ನು ಕಳುಹಿಸುವರು. ಆತನು ಆ ಜನರನ್ನು ಬಿಡುಗಡೆಮಾಡಿ ಉದ್ಧರಿಸುವನು.


ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.


ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.


“ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.


ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು