Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:25 - ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:25
16 ತಿಳಿವುಗಳ ಹೋಲಿಕೆ  

ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು.


ಒಂದು ದಿನ ಅಮಿತ್ತಾಯನ ಮಗನಾದ ಯೋನನಿಗೆ ಸರ್ವೇಶ್ವರಸ್ವಾಮಿಯ ವಾಣಿ ಕೇಳಿಸಿತು.


ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದುವರೆದು ಗತ್ ಹೇಫರ್, ಎತ್ ಕಾಚೀನ್ ಇವುಗಳ ಮೇಲೆ ನೇಯದ ಮಗ್ಗಲಲ್ಲಿರುವ ರಿಮ್ಮೇನಿಗೆ ಹೋಗುತ್ತದೆ.


ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.


ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ: “ಎತ್ತಿಕಟ್ಟುವೆನು ನಿಮಗೆ ವಿರುದ್ಧವಾಗಿ ಜನಾಂಗವೊಂದನ್ನು; ಸದೆಬಡಿವುದದು ನಿಮ್ಮನ್ನು ಹಮಾತಿನ ದಾರಿಯಿಂದ ಅರಬಾ ತೊರೆಯ ತನಕ.”


ಯೆಹೋವಾಹಾಜನ ಮಗ ಯೋವಾಷನು, ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು, ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ಪಡೆದನು.


ಈ ಕಾಲದಲ್ಲಿ ಇಸ್ರಯೇಲರನ್ನು ಸರ್ವೇಶ್ವರ ಕುಗ್ಗಿಸತೊಡಗಿದರು.


ಅವನ ಮುಖಾಂತರವಾಗಿ ಅವರು ಸಿರಿಯಾದವರ ಕೈಯಿಂದ ಬಿಡುಗಡೆಯಾಗಿ, ಮುಂದಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು