Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:7 - ಕನ್ನಡ ಸತ್ಯವೇದವು C.L. Bible (BSI)

7 ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಉಪ್ಪಿನತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಹೊಡೆದು ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಸೋಲಿಸಿ, ಯುದ್ಧದಲ್ಲಿ ಸೆಲ ದುರ್ಗವನ್ನು ವಶಪಡಿಸಿಕೊಂಡು, ಅದಕ್ಕೆ ಯೊಕ್ತೆಯೇಲ್ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:7
11 ತಿಳಿವುಗಳ ಹೋಲಿಕೆ  

ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು.


ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಕಳುಹಿಸಿ ಕುರಿಗಳನು ಕಪ್ಪಕಾಣಿಕೆಯಾಗಿ ದೇಶಾಧಿಪತಿಗೆ, ಕಳುಹಿಸಿ ಮರುಭೂಮಿಯ ಸೆಲಾದಿಂದ ಸಿಯೋನ್ ಪರ್ವತಕೆ.


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು