Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಇಸ್ರಯೇಲರ ಅರಸನಾದ ಯೋವಾಷ ಜುದೇಯದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು,’ ಎಂದು ಹೇಳಿಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗ ಅಲ್ಲಿಂದ ಹಾದುಹೋಗುತ್ತಿರುವಾಗ ಆ ಮುಳ್ಳುಗಿಡವನ್ನು ತುಳಿದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ - ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರುಮರಕ್ಕೆ - ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ಆ ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:9
15 ತಿಳಿವುಗಳ ಹೋಲಿಕೆ  

ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.


ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು.


ನನ್ನ ಪ್ರಿಯಳು ಸ್ತ್ರೀಯರಲ್ಲಿ ಶ್ರೇಷ್ಠಳು ಮುಳ್ಳುಪೊದರಿನ ನಡುವೆ ತಾವರೆಯಂತಿಹಳು. ನಲ್ಲೆ :


ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲು.


ಇಲ್ಲ, ಬಾಲ್ಯದಲ್ಲಿ ಅನಾಥನನು ತಂದೆಯೋಪಾದಿಯಲಿ ಸಾಕಿದೆ ಹುಟ್ಟಿದಂದಿನಿಂದ ಅನಾಥನಿಗೆ ದಾರಿತೋರಿಸಿದೆ.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಆಗ ಇಸ್ರಯೇಲರ ಅರಸ ಯೋವಾಷನು ಯೆಹೂದ್ಯರ ಅರಸ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡ ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ, ಲೆಬನೋನಿನ ಒಂದು ಕಾಡುಮೃಗ ಆ ಮಾರ್ಗವಾಗಿ ಹಾದುಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದುಬಿಟ್ಟಿತು.


ಅವನು, ಲೆಬನೋನಿನ ದೇವದಾರುವೃಕ್ಷ ಮೊದಲ್ಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನು ಕುರಿತು, ಎಲ್ಲಾ ಪಶುಪಕ್ಷಿ, ಜಲಜಂತು, ಕ್ರಿಮಿಕೀಟಗಳನ್ನು ಕುರಿತು ಪ್ರಸ್ತಾಪಿಸಬಲ್ಲವನಾಗಿದ್ದನು.


ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.


ಎಂದಾದರೂ ಕಾಲು, “ನಾನು ಕೈ ಅಲ್ಲ, ಈ ಕಾರಣ ನಾನು ದೇಹಕ್ಕೆ ಸೇರಿಲ್ಲ,” ಎಂದು ಹೇಳಿದ್ದಾದರೆ ಅದು ದೇಹದ ಅಂಗವಾಗಿರುವುದು ತಪ್ಪೀತೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು