Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:13 - ಕನ್ನಡ ಸತ್ಯವೇದವು C.L. Bible (BSI)

13 ಜುದೇಯದ ಅರಸ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೂದದ ಅರಸನಾದ ಉಜ್ಜೀಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದದ ರಾಜನಾದ ಉಜ್ಜೀಯನ ಮೂವತ್ತೊಂಭತ್ತನೆಯ ವರ್ಷದ ಆಳ್ವಿಕೆಯಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರೇಲಿನ ರಾಜನಾದನು. ಶಲ್ಲೂಮನು ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಅರಸನಾಗಿ, ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:13
12 ತಿಳಿವುಗಳ ಹೋಲಿಕೆ  

ಇಸ್ರಯೇಲರ ಅರಸ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗ ಅಜರ್ಯನು ಜುದೇಯದ ಅರಸನಾದನು.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ನುಂಗಿದ ಗಂಟನು ಅವನು ಹೊರಗೆ ಕಕ್ಕುವನು ಹೊಟ್ಟೆಯಿಂದ ದೇವರು ಅದನು ಹೊರಡಿಸುವನು.


ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ಜೆಕರ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಆರು ತಿಂಗಳು ಆಳಿದನು.


ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿ ಎಂಬವನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಏಳು ದಿವಸ ಆಳಿದನು. ಆ ಸಮಯದಲ್ಲಿ ಇಸ್ರಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.


ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.


“ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು