Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:14 - ಕನ್ನಡ ಸತ್ಯವೇದವು C.L. Bible (BSI)

14 ಗಾದಿಯ ಮಗ ಮೆನಹೇಮನೆಂಬವನು ತಿರ್ಚದಿಂದ ಸಮಾರಿಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗ ಶಲ್ಲೂಮನನ್ನು ಕೊಂದು ಅವನ ಸ್ಥಾನದಲ್ಲಿ ತಾನೇ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಗಾದಿಯ ಮಗನಾದ ಮೆನಹೇಮನೆಂಬವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದನು. ಮೆನಹೇಮನು ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದುಹಾಕಿದನು. ನಂತರ ಮೆನಹೇಮನು ಅವನ ನಂತರ ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಗಾದಿಯ ಮಗ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದು, ಸಮಾರ್ಯದಲ್ಲಿ ಯಾಬೇಷನ ಮಗ ಶಲ್ಲೂಮನನ್ನು ಹೊಡೆದು, ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:14
9 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನ ಹೆಂಡತಿ ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟಕೂಡಲೆ ಹುಡುಗನು ಸತ್ತನು.


ಇವನೂ ಇವನ ಜೊತೆಯಲ್ಲಿದ್ದ ಇಸ್ರಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿ ಎಂಬವನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಏಳು ದಿವಸ ಆಳಿದನು. ಆ ಸಮಯದಲ್ಲಿ ಇಸ್ರಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.


ಜುದೇಯದ ಅರಸ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಇಸ್ರಯೇಲರ ಅರಸನಾಗಿ ತಿರ್ಚದಲ್ಲಿ ಇದ್ದುಕೊಂಡು ಇಪ್ಪತ್ತನಾಲ್ಕು ವರ್ಷ ಆಳಿದನು.


ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲೇ ವಾಸಿಸಿದನು.


ಶಲ್ಲೂಮನ ಉಳಿದ ಚರಿತ್ರೆ ಹಾಗು ಅವನ ಒಳಸಂಚಿನ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹತ್ತು ವರ್ಷ ಆಳಿದನು.


ಯಾಬೇಷನ ಮಗ ಶಲ್ಲೂಮನು ಅವರಿಗೆ ವಿರುದ್ಧ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನೇ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು