Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:38 - ಕನ್ನಡ ಸತ್ಯವೇದವು C.L. Bible (BSI)

38 ಯೋತಾಮನು ಸತ್ತು ಪಿತೃಗಳ ಬಳಿ ಸೇರಲು ಅವನ ಶವವನ್ನು ಅವನ ಪೂರ್ವಜನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಾಜನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೋತಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬಶ್ಮಶಾನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೋತಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಯೋತಾಮನನ್ನು ಅವನ ಪೂರ್ವಿಕನಾದ ದಾವೀದನ ನಗರದಲ್ಲಿ ಸಮಾಧಿಮಾಡಿದರು. ಯೋತಾಮನ ನಂತರ ಅವನ ಮಗನಾದ ಅಹಾಜನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:38
12 ತಿಳಿವುಗಳ ಹೋಲಿಕೆ  

ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು.


ಅಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಅವನು ಹದಿನಾರು ವರ್ಷ ಆಳಿದನು. ಸರ್ವೇಶ್ವರನ ಚಿತ್ತಾನುಸಾರ ಅವನು ನಡೆಯಲಿಲ್ಲ.


ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಜುದೇಯದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.


ರೆಹಬ್ಬಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗ ಅಬೀಯಾಮನು ಅವನ ಸ್ಥಾನದಲ್ಲಿ ಅರಸನಾದನು.


ಅವನು ಇಪ್ಪತ್ತೆರಡು ವರ್ಷ ಆಳಿ ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.


ಆದುದರಿಂದ ಅವನ ಸೇವಕರು, “ಒಡೆಯರೇ, ಅರಸರೇ, ತಮ್ಮ ಸನ್ನಿಧಿಯಲ್ಲಿದ್ದುಕೊಂಡು ತಮಗೆ ಶುಶ್ರೂಷೆಮಾಡಲು ಒಬ್ಬ ಕನ್ನಿಕೆಯನ್ನು ಹುಡುಕಬೇಕಾಗಿದೆ. ಆಕೆ ನಮ್ಮ ಒಡೆಯರೂ ಅರಸರೂ ಆದ ತಮ್ಮ ಮಗ್ಗುಲಲ್ಲೇ ಮಲಗಿ ತಮ್ಮನ್ನು ಬೆಚ್ಚಗಿರಿಸುವಳು,” ಎಂದು ಹೇಳಿದರು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಸರ್ವೇಶ್ವರ ಆ ಕಾಲದಲ್ಲಿ ಸಿರಿಯಾದ ಅರಸ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದ್ಯರಿಗೆ ವಿರುದ್ಧ ಕಳುಹಿಸತೊಡಗಿದರು.


ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.


ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.


ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಹಾಜನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು