Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:14 - ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಯೆಹೋವನ ಆಲಯಕ್ಕೂ ತನ್ನ ವೇದಿಗೂ ಮಧ್ಯದಲ್ಲಿದ್ದು ಆವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರವೇದಿಯನ್ನು ಆಲಯದ ಎದುರಿನಿಂದ ತೆಗೆಯಿಸಿ ತನ್ನ ವೇದಿಯ ಉತ್ತರ ದಿಕ್ಕಿನಲ್ಲಿಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಸಮ್ಮುಖದಲ್ಲಿ ಕಂಚಿನ ಬಲಿಪೀಠವನ್ನು ದೇವಾಲಯದ ಮುಂಭಾಗದಿಂದ ಅಂದರೆ ಯೆಹೋವ ದೇವರ ಆಲಯಕ್ಕೂ, ಬಲಿಪೀಠಕ್ಕೂ ಮಧ್ಯದಿಂದಲೂ ತಂದು, ಅದನ್ನು ಹೊಸ ಬಲಿಪೀಠಕ್ಕೆ ಉತ್ತರ ಕಡೆಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:14
12 ತಿಳಿವುಗಳ ಹೋಲಿಕೆ  

ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,


ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.


ದೇವದರ್ಶನದ ಗುಡಾರದ ಬಾಗಿಲಿನ ಮುಂದುಗಡೆಯಲ್ಲಿ ಬಲಿಪೀಠವನ್ನು ಇಡು.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ಆದರೂ ಊರೀಯನ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿಸಿದ್ದ ತಾಮ್ರದ ಬಲಿಪೀಠ, ಅಲ್ಲೇ ಗಿಬ್ಯೋನಿನಲ್ಲಿ ಸರ್ವೇಶ್ವರನ ಗುಡಾರದ ಮುಂದೆ ಇತ್ತು. ಈ ಕಾರಣ ಸೊಲೊಮೋನನೂ ಅವನ ಸಮಾಜದವರೂ ಅಲ್ಲಿಗೆ ದರ್ಶನಕ್ಕಾಗಿ ಹೋಗುತ್ತಿದ್ದರು.


ಅರಸ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಪೂಜಾಪೀಠವನ್ನು ಮಾಡಿಸಿಬಿಟ್ಟಿದ್ದನು.


“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.


ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ತಾನು ತಂದ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.


ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.


ಅರಸ ಅಹಾಜನು, ತನ್ನ ಆಳ್ವಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ಮತ್ತೆ ತಂದು ಇಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಸರ್ವೇಶ್ವರನ ಬಲಿಪೀಠದ ಮುಂದಿರುತ್ತವೆ,” ಎಂದು ವರದಿಮಾಡಿದರು.


ನನ್ನ ಹೊಸ್ತಲನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು, ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ನನ್ನ ಪವಿತ್ರನಾಮವನ್ನು ಅಶುದ್ಧಗೊಳಿಸರು. ಹೌದು, ಹಿಂದೆ ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲೆಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು