Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:15 - ಕನ್ನಡ ಸತ್ಯವೇದವು C.L. Bible (BSI)

15 ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:15
25 ತಿಳಿವುಗಳ ಹೋಲಿಕೆ  

ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.


ಸರ್ವೇಶ್ವರನ ಆಲಯದ ಮುಂದಿರುವ ತಾಮ್ರದ ಬಲಿಪೀಠ ಈ ಎಲ್ಲಾ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ‌ ಸಮಾಧಾನ ಬಲಿಯ ಕೊಬ್ಬನ್ನೂ ಹಿಡಿಸುವಷ್ಟು ದೊಡ್ಡದಾಗಿರಲಿಲ್ಲ. ಆದುದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿಯೂ ಇವುಗಳನ್ನೆಲ್ಲ ಸಮರ್ಪಿಸಿದನು.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ಅನುದಿನದ ಬಲಿ ನಿಂತುಹೋಗುವುದು. ‘ವಿನಾಶಕರ ವಿಕಟ ಮೂರ್ತಿ’ ಪ್ರತಿಷ್ಠಿತವಾದ ಮೇಲೆ 1290 ದಿನಗಳು ಕಳೆಯಬೇಕು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:


ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ಇದಲ್ಲದೆ, ಯಾಜಕರು ಸಮರ್ಪಿಸಬೇಕಾಗಿದ್ದ ದಹನಬಲಿ, ಶಾಂತಿಸಮಾಧಾನ ಬಲಿಗಳ ಕೊಬ್ಬು ಹಾಗು ದಹನಬಲಿ ಸಂಬಂಧವಾದ ಪಾನದ್ರವ್ಯ ಇವೂ ಅಪಾರವಾಗಿ ಇದ್ದವು.


ಹೀಗೆ ಸಭಿಕರು ದಹನಬಲಿದಾನಕ್ಕಾಗಿ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆಗಾಗಿಯೇ ಕೊಡಲಾದುವು.


ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.


ಪ್ರಾತಃಕಾಲದ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ನಾಡಿನಲ್ಲೆಲ್ಲಾ ತುಂಬಿಕೊಂಡಿತು.


ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,


ಆ ಪಾತ್ರೆಯಿಂದಲೆ ಅಲ್ಲವೆ ನನ್ನ ದಣಿ ಪಾನಮಾಡುವುದು? ಅದರಲ್ಲಿ ನೋಡೇ ಅಲ್ಲವೆ ಶಕುನ ಹೇಳುವುದು? ನೀವು ಮಾಡಿರುವುದು ಮಹಾ ನೀಚತನ, ಎನ್ನಬೇಕು,” ಎಂದು ತಿಳಿಸಿದನು.


ಯಾಜಕ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.


ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು