Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:4 - ಕನ್ನಡ ಸತ್ಯವೇದವು C.L. Bible (BSI)

4 ಪೂಜಾಸ್ಥಳಗಳಲ್ಲೂ ದಿಣ್ಣೆಗಳ ಮೇಲೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಧೂಪಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೆಯೂ ಎಲ್ಲಾ ಹಸುರು ಮರಗಳ ಕೆಳಗೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:4
12 ತಿಳಿವುಗಳ ಹೋಲಿಕೆ  

“ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ನಿಮ್ಮ ಮಕ್ಕಳು ಸೊಂಪಾಗಿ ಬೆಳೆದ ಮರಗಳನ್ನಾಗಲಿ ಎತ್ತರವಾದ ಗುಡ್ಡಗಳನ್ನಾಗಲಿ, ಬೈಲಿನ ಬೆಟ್ಟಗಳನ್ನಾಗಲಿ ಕಂಡಾಗಲೆಲ್ಲ ಅವರ ಬಲಿಪೀಠಗಳನ್ನು ಹಾಗು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುತ್ತಾರೆ.


“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ.


ಇವನ ಕಾಲದಲ್ಲೂ ಪೂಜಾಸ್ಥಳಗಳು ಹಾಗೆಯೇ ಇದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು