Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:10 - ಕನ್ನಡ ಸತ್ಯವೇದವು C.L. Bible (BSI)

10 ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲುಕಂಬ, ಅಶೇರವಿಗ್ರಹ ಸ್ತಂಭ ಇವುಗಳನ್ನು ನಿಲ್ಲಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲರು ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಗಿಡಗಳ ಅಡಿಯಲ್ಲೂ ಸ್ಮಾರಕಕಲ್ಲುಗಳನ್ನು ಮತ್ತು ಅಶೇರ್ ವಿಗ್ರಹಕಲ್ಲುಗಳನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:10
14 ತಿಳಿವುಗಳ ಹೋಲಿಕೆ  

ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು.


ಪೂಜಾಸ್ಥಳಗಳಲ್ಲೂ ದಿಣ್ಣೆಗಳ ಮೇಲೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಧೂಪಗಳನ್ನು ಸಮರ್ಪಿಸಿದನು.


ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.


ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.


“ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ನೀವು ಕಟ್ಟಿಸಿಕೊಳ್ಳುವ ಬಲಿಪೀಠದ ಬಳಿ ಅಶೇರವೆಂಬ ವಿಗ್ರಹಸ್ತಂಭವನ್ನು, ಅದು ಯಾವ ವಿಧವಾದ ಮರದಿಂದ ಮಾಡಿರಲಿ, ಅದನ್ನು ನೆಡಬಾರದು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


ನೀವು ಸೇರುವ ನಾಡಿನ ನಿವಾಸಿಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಮಾಡಿಕೊಂಡರೆ ಅದು ಕೊರಳನ್ನು ಸಿಕ್ಕಿಸುವ ಉರುಳಾಗುವುದು.


ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ಅವರನ್ನು ರೇಗಿಸಿದರು;


ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು.


ದೇಶದಲ್ಲಿ ವಿಗ್ರಹಗಳು ತುಂಬಿ ತುಳುಕುತ್ತಿವೆ. ಜನರು ತಮ್ಮ ಕೈಯಿಂದ ಮಾಡಿದ ವಿಗ್ರಹಗಳನ್ನೇ ಪೂಜಿಸುತ್ತಿದ್ದಾರೆ.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು