Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:11 - ಕನ್ನಡ ಸತ್ಯವೇದವು C.L. Bible (BSI)

11 ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ಅವರನ್ನು ರೇಗಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕೃತ್ಯಗಳಿಂದ ಯೆಹೋವನು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ತಮ್ಮ ಮುಂದೆ ಓಡಿಸಿಬಿಟ್ಟ ಇತರ ಜನರಂತೆ ಅವರು ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪವನ್ನು ಸುಟ್ಟು ಯೆಹೋವ ದೇವರನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:11
15 ತಿಳಿವುಗಳ ಹೋಲಿಕೆ  

ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಜುದೇಯದ ಎಲ್ಲ ಪಟ್ಟಣಗಳಲ್ಲೂ ಪೂಜಾಸ್ಥಳಗಳನ್ನು ನಿರ್ಮಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


“ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು.


ಸರ್ವೇಶ್ವರನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು.


ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.


ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು