Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:26 - ಕನ್ನಡ ಸತ್ಯವೇದವು C.L. Bible (BSI)

26 ಅಸ್ಸೀರಿಯದ ರಾಜನ ಸೇವಕರು ಅವನಿಗೆ, “ನೀವು ಸಮಾರಿಯಾ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು, ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ - ನೀನು ಸಮಾರ್ಯಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಶ್ಶೂರದ ರಾಜನಿಗೆ ಕೆಲವು ಜನರು, “ನೀನು ಕೆಲವು ಜನರನ್ನು ಒಯ್ದು ಸಮಾರ್ಯ ನಗರಗಳಲ್ಲಿ ಇರಿಸಿದೆ. ಅವರು ಆ ದೇಶದ ದೇವರ ನಿಯಮಗಳ ಬಗ್ಗೆ ತಿಳಿದುಕೊಂಡಿಲ್ಲ. ಆದ್ದರಿಂದ ಅವರನ್ನು ಆಕ್ರಮಣಮಾಡಲು ದೇವರು ಸಿಂಹಗಳನ್ನು ಕಳುಹಿಸಿದನು. ಆ ದೇಶದ ದೇವರ ನಿಯಮಗಳನ್ನು ಅವರು ತಿಳಿದಿಲ್ಲದಿರುವುದರಿಂದ ಅವರನ್ನು ಸಿಂಹಗಳು ಕೊಂದುಹಾಕಿದವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದಕಾರಣ ಸೇವಕರು ಅಸ್ಸೀರಿಯದ ಅರಸನಿಗೆ, “ನೀನು ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನರು ಆ ದೇಶದ ದೇವರು ಅಪೇಕ್ಷಿಸುವುದನ್ನು ತಿಳಿಯದೆ ಇದ್ದಾರೆ. ಆದುದರಿಂದ, ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾರೆ. ಅವು ಅವರನ್ನು ಕೊಂದುಹಾಕುತ್ತವೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:26
5 ತಿಳಿವುಗಳ ಹೋಲಿಕೆ  

ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”


ಆಗ ಅವನು, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅವರಿಗೆ ಕಲಿಸಲಿ,” ಎಂದು ಆಜ್ಞಾಪಿಸಿದನು.


ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಸರ್ವೇಶ್ವರನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.


ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು