Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:32 - ಕನ್ನಡ ಸತ್ಯವೇದವು C.L. Bible (BSI)

32 ಅವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮಲ್ಲೆ ಯಾರ್ಯಾರನ್ನೋ ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು, ಅವರ ಮುಖಾಂತರ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಯೆಹೋವನ ಭಕ್ತರಾಗಿ ಕನಿಷ್ಠಜನರಲ್ಲಿ ಕೆಲವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಅವರು ಯೆಹೋವನಲ್ಲಿಯೂ ಭಕ್ತಿಯನ್ನಿಟ್ಟಿದ್ದರು. ಅವರು ಉನ್ನತಸ್ಥಳಗಳಿಗೆ ಯಾಜಕರನ್ನು ಜನರಲ್ಲಿಯೇ ಆಯ್ಕೆ ಮಾಡಿಕೊಂಡರು. ಆ ಯಾಜಕರು ಜನರಿಗಾಗಿ ಉನ್ನತಸ್ಥಳಗಳಲ್ಲಿನ ದೇವಾಲಯಗಳಲ್ಲಿ ಯಜ್ಞವನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:32
11 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು.


ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರಿಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ಇಸ್ರಯೇಲ್ ರಾಜರು ಸಮಾರಿಯ ಪಟ್ಟಣಗಳಲ್ಲಿ ಕಟ್ಟಿಸಿದಂಥ ಹಾಗು ಸರ್ವೇಶ್ವರನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳಲ್ಲಿದ್ದ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.


ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.


ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ಆ ದೈವಭಕ್ತನ ಶವ ಇರುವಲ್ಲೇ ಸಮಾಧಿಮಾಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳಿರುವಲ್ಲೇ ಇಡಿ.


ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.


ಸರ್ವೇಶ್ವರನ ಭಕ್ತರಾಗಿದ್ದ ಅವರು ತಾವು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.


ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು, “ನಿಮ್ಮೊಡನೆ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ; ಏಕೆಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರು; ನಮ್ಮನ್ನು ಇಲ್ಲಿ ತಂದಿರಿಸಿದ ಅಸ್ಸೀರಿಯದ ಅರಸ ಏಸರ್ಹದ್ದೋನನ ಕಾಲದಿಂದ ನಾವು ಆ ದೇವರಿಗೇ ಬಲಿಯರ್ಪಣೆ ಮಾಡುತ್ತಾ ಬಂದಿದ್ದೇವೆ,” ಎಂದು ಹೇಳಿದರು.


ಎಂಟನೆಯ ತಿಂಗಳ ಹದಿನೈದನೆಯ ದಿನ ಇಸ್ರಯೇಲರು ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಛೆಯಿಂದ ಗೊತ್ತುಮಾಡಿದನು. ಆ ಸಮಯಕ್ಕೆ ತಾನೂ ಬೇತೇಲಿನ ಬಲಿಪೀಠದ ಬಳಿಗೆ ಹೋಗಿ ಧೂಪಾರತಿ ಎತ್ತಲು ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.


ಆ ಜನಾಂಗಗಳವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನು ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು