Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:8 - ಕನ್ನಡ ಸತ್ಯವೇದವು C.L. Bible (BSI)

8 ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್‍ರಾಜರ ದುರಾಚಾರಗಳನ್ನು ಅನುಸರಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅನ್ಯರು ಮಾಡುವಂತಹ ಕಾರ್ಯಗಳನ್ನೇ ಮಾಡತೊಡಗಿದರು. ಇಸ್ರೇಲರು ಈಜಿಪ್ಟಿನಿಂದ ತಮ್ಮ ದೇಶಕ್ಕೆ ಬಂದಾಗ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತವಾಗಿ ಹೊರಗಟ್ಟಿದ್ದನು. ಆದರೆ ಇಸ್ರೇಲರು ತಮ್ಮನ್ನು ಆಳುವುದಕ್ಕಾಗಿ ದೇವರನ್ನು ತೊರೆದು ರಾಜರನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ಮುಂದೆ ಯೆಹೋವ ದೇವರು ಓಡಿಸಿಬಿಟ್ಟಿದ್ದ ಜನರ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:8
19 ತಿಳಿವುಗಳ ಹೋಲಿಕೆ  

ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.


ನೀವು ವಾಸವಾಗಿದ್ದ ಈಜಿಪ್ಟಿನ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಕರೆದೊಯ್ಯುತ್ತಿರುವ ಕಾನಾನ್ ನಾಡಿನ ಆಚರಣೆಗಳನ್ನು ಕೂಡ ನೀವು ಅನುಸರಿಸಬಾರದು. ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಕೂಡದು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


“ಅನ್ಯಜನಾಂಗಗಳ ಆಚರಣೆಯನ್ನು ಅನುಸರಿಸಬೇಡಿ ಅವರು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿ.


ಅನ್ಯಜನರೊಡನವರು ಕಲೆತು ಬೆರೆತುಹೋದರು I ಅವರ ದುರಾಚಾರಗಳನ್ನೂ ಕಲಿತುಕೊಂಡರು II


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಜುದೇಯದವರು ಸಹ ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಯೇಲರ ಪದ್ಧತಿಯನ್ನು ಅನುಸರಿಸಿದ್ದರಿಂದ,


ಅರಸ ಆಹಾಜನು ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು; ಅಲ್ಲಿದ್ದ ಬಲಿಪೀಠವನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕ ಊರೀಯನಿಗೆ ಕಳುಹಿಸಿದನು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


ಆದರೆ ಅವರು ಅದನ್ನು ಲಕ್ಷಿಸದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು