Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:9 - ಕನ್ನಡ ಸತ್ಯವೇದವು C.L. Bible (BSI)

9 ತಮ್ಮ ದೇವರಾದ ಆ ಸರ್ವೇಶ್ವರನಿಗೆ ವಿರೋಧವಾದ ಕೃತ್ಯಗಳನ್ನು ಗುಪ್ತವಾಗಿ ನಡೆಸಿದರು; ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗುಪ್ತವಾಗಿ ತಮ್ಮ ದೇವರಾದ ಯೆಹೋವನಿಗೆ ವಿರೋಧವಾದ ಕೃತ್ಯಗಳನ್ನು ನಡಿಸಿದರು; ಕಾವಲುಗಾರರ ಬುರುಜುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು. ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲರು ರಹಸ್ಯವಾಗಿ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಯುಕ್ತವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲುಗೊಂಡು ಕೋಟೆಯುಳ್ಳ ಪಟ್ಟಣಗಳವರೆಗೂ, ತಮ್ಮ ಸಮಸ್ತ ಪಟ್ಟಣಗಳಲ್ಲಿ ತಮಗೆ ಪೂಜಾಸ್ಥಳಗಳನ್ನು ಕಟ್ಟಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:9
10 ತಿಳಿವುಗಳ ಹೋಲಿಕೆ  

ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ನನ್ನ ಹೃದಯ ಅವಕ್ಕೆ ಮಾರುಹೋಗಿದ್ದರೆ ಬಾಯ್ಮೇಲೆ ಕೈಯಿಟ್ಟು ಅವನ್ನು ಆರಾಧಿಸಿದ್ದರೆ,


‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು