Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಜುದೇಯದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ಅಪರಾಧಿ; ತಾವು ನನ್ನನ್ನು ಬಿಟ್ಟುಹೋಗಬೇಕು; ತಾವು ನನಗೆ ವಿಧಿಸುವಷ್ಟನ್ನೂ ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಅಸ್ಸೀರಿಯದ ಅರಸನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ಅಪರಾಧಿ; ನೀನು ನನ್ನನ್ನು ಬಿಟ್ಟುಹೋಗು, ನೀನು ನನಗೆ ವಿಧಿಸುವಷ್ಟನ್ನು ಕೊಡುತ್ತೇನೆ ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. ಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:14
9 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.


ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ.


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಅದಕ್ಕೆ ಇಸ್ರಯೇಲರ ಆ ಅರಸನು, “ನನ್ನ ಒಡೆಯನಾದ ಅರಸರೇ, ನೀವು ಹೇಳಿದಂತೆ ನಾನು ನಿಮ್ಮವನೇ; ನನಗಿರುವುದೆಲ್ಲವೂ ನಿಮ್ಮದೇ,” ಎಂದು ಉತ್ತರಕೊಟ್ಟು ಕಳುಹಿಸಿದನು.


ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.


ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.


ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ, ಅಸ್ಸೀರಿಯದ ಅರಸನು ಲಾಕೀಷನನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.


ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.


ಅಸ್ಸೀರಿಯದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡನು. ಆ ಹಣ ಸಿಕ್ಕಿದ ನಂತರ ಅಸ್ಸೀರಿಯದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು