Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:21 - ಕನ್ನಡ ಸತ್ಯವೇದವು C.L. Bible (BSI)

21 ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಈ ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಗೋ, ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು! ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:21
12 ತಿಳಿವುಗಳ ಹೋಲಿಕೆ  

ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.


ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.


ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಸುಡಾನನ್ನು ನೆಚ್ಚಿಕೊಂಡಿದ್ದವರು ಮತ್ತು ಈಜಿಪ್ಟನ್ನು ಕುರಿತು ಕೊಚ್ಚಿಕೊಳ್ಳುತ್ತಿದ್ದವರು ನಾಚಿಕೆಪಟ್ಟು ನಿರಾಶೆಗೊಳ್ಳುವರು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:


ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು