Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:27 - ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನರು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕಾಗಿಯೇ ಕಳುಹಿಸಿದ್ದಾರೆ. ಈ ಜನರು ನಿಮ್ಮೊಡನೆ ಇದ್ದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ರಬ್ಷಾಕೆಯು - ನನ್ನ ಯಜಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಒಡೆಯನ ಸಂಗಡವಾಗಲಿ ಮಾತಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕೂತಿರುವ ಜನರ ಸಂಗಡ ಮಾತಾಡುವದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವದು ಎಂದು ಉತ್ತರಕೊಟ್ಟು ಎದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ರಬ್ಷಾಕೆಯು ಅವರಿಗೆ, “ನನ್ನ ಒಡೆಯನು ನನ್ನನ್ನು ಕಳುಹಿಸಿದ್ದು ನಾನು ನಿಮ್ಮೊಂದಿಗೆ ಮತ್ತು ನಿಮ್ಮ ರಾಜನೊಂದಿಗೆ ಮಾತ್ರ ಮಾತಾಡುವುದಕ್ಕಲ್ಲ. ಗೋಡೆಯ ಮೇಲೆ ಕುಳಿತಿರುವ ಇತರ ಜನರೊಂದಿಗೂ ನಾನು ಮಾತನಾಡುತ್ತೇನೆ! ಅವರು ನಿಮ್ಮೊಂದಿಗಿದ್ದರೆ ತಮ್ಮ ಮಲವನ್ನು ತಾವೇ ತಿನ್ನಬೇಕಾಗುತ್ತದೆ ಮತ್ತು ತಮ್ಮ ಮೂತ್ರವನ್ನು ತಾವೇ ಕುಡಿಯಬೇಕಾಗುತ್ತದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:27
11 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ. ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ,” ಎಂದು ಉತ್ತರಕೊಟ್ಟರು.


“ಹಾಗೆಯೇ ಇಸ್ರಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಸರ್ವೇಶ್ವರನಾದ ನನ್ನ ನುಡಿ.”


ಮೃಷ್ಟಾನ್ನ ಉಣ್ಣುತ್ತಿದ್ದವರು ದಿಕ್ಕೆಟ್ಟು ಅಲೆಯುತ್ತಿರುವರು ಚಿಕ್ಕಂದಿನಿಂದಲೆ ನಾರುಮಡಿಯನ್ನು ತೊಡುತ್ತಿದ್ದವರು ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿಗೆ ಇಳಿದಿರುವರು.


ಕೇಡು ಮಾತು, ಕೆಣಕು ಮಾತು ಅವರದು I ಜೊತೆಗೆ ಬಲಾತ್ಕಾರದ ಸೊಕ್ಕು ಮಾತು II


ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು.


ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ರಬ್ಷಾಕೆಗೆ, “ದಯವಿಟ್ಟು ನಿಮ್ಮ ಸೇವಕರಾದ ನಮ್ಮೊಡನೆ ಅರಾಮಾಯಿಕ್ ಭಾಷೆಯಲ್ಲಿ ಮಾತನಾಡಿ. ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರೂ ಭಾಷೆಯಲ್ಲಿ ಮಾತನಾಡಬೇಡಿ. ಅದು ಪೌಳಿಗೋಡೆಯ ಮೇಲಿರುವವರಿಗೂ ಅರ್ಥವಾಗುತ್ತದೆ,” ಎಂದರು.


ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರೂ ಭಾಷೆಯಲ್ಲೇ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ;


ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು.


ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು