Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:29 - ಕನ್ನಡ ಸತ್ಯವೇದವು C.L. Bible (BSI)

29 ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ ಹೀಗೆಂದನು: “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯ ಮಾಡಿ ಶೇಖರಿಸಿದ್ದನ್ನು ಅನುಭವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆ ಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:29
13 ತಿಳಿವುಗಳ ಹೋಲಿಕೆ  

ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು.


ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ, “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು : ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯಮಾಡಿ ಶೇಖರಿಸಿದ್ದನ್ನು ಅನುಭವಿಸುವಿರಿ.


ಇದೆಲ್ಲಾ ನೆರವೇರುವುದು ಎಂಬುದಕ್ಕೆ ಗುರುತಾಗಿ ನಿನ್ನ ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ್ ಒಂದೇ ದಿನದಲ್ಲಿ ಸಾಯುವರು.


‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಉತ್ತು ಬಿತ್ತಿದರು, ನೆಟ್ಟರು ದ್ರಾಕ್ಷಾಲತೆಯನು I ಕೂಡಿಸಿಕೊಂಡರು ಅಧಿಕವಾದ ಆದಾಯವನು II


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ಭೂಮಿ ತಾನಾಗಿಯೇ ಬೆಳೆದದ್ದು ನಿಮಗೆ, ನಿಮ್ಮ ದಾಸದಾಸಿಯರಿಗೆ, ಕೂಲಿಯವರಿಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು