Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:3 - ಕನ್ನಡ ಸತ್ಯವೇದವು C.L. Bible (BSI)

3 ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ದಿವಸದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ; ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:3
13 ತಿಳಿವುಗಳ ಹೋಲಿಕೆ  

ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.


ಪ್ರಸವಕ್ಕೆ ತಂದ ನಾನು ಹೆರಲಿಕ್ಕೆ ಬಿಡದಿರುವೆನೊ?’ - ಎನ್ನುತ್ತಾರೆ ನಿಮ್ಮ ದೇವರು. ‘ಹೆರುವಂತೆ ಮಾಡುವವನಾದ ನಾನು ಗರ್ಭ ಮುಚ್ಚಿಬಿಡುವೆನೊ?’ ಎನ್ನುತ್ತಾರೆ ಸ್ವಾಮಿ ಸರ್ವೇಶ್ವರ.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II


ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II


ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು.


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು