Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:15 - ಕನ್ನಡ ಸತ್ಯವೇದವು C.L. Bible (BSI)

15 ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:15
21 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.


ಆಕೆ ಹತ್ತಿರ ಬಂದು ಅವನ ಪಾದಗಳಿಗೆ ಬಿದ್ದು, ಸಾಷ್ಟಾಂಗ ನಮಸ್ಕಾರ ಮಾಡಿ, ಮಗನನ್ನು ತೆಗೆದುಕೊಂಡು ಹೋದಳು.


ಜೆರಿಕೋವಿನ ಜನರು ಎಲೀಷ, “ನಮ್ಮ ಒಡೆಯರಾದ ನಿಮಗೆ ಗೊತ್ತಿರುವಂತೆ ಈ ಊರು ಕಟ್ಟಿಸಿರುವ ಸ್ಥಳ ಚೆನ್ನಾಗಿದೆ. ಆದರೆ ನೀರು ಕೆಟ್ಟದ್ದು. ಆದುದರಿಂದ ಗರ್ಭಪಾತ ಹೆಚ್ಚು,” ಎಂದು ಹೇಳಿದರು.


ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ಆ ದಿನ ಸರ್ವೇಶ್ವರ ಯೆಹೋಶುವನನ್ನು ಇಸ್ರಯೇಲರೆಲ್ಲರ ದೃಷ್ಟಿಯಲ್ಲಿ ಇಷ್ಟು ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ, ಇವನು ಜೀವದಿಂದಿದ್ದ ಕಾಲವೆಲ್ಲ ಗೌರವವುಳ್ಳವರು ಆಗಿದ್ದರು.


ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ಸಮಾಜದವರೆಲ್ಲರು ಅವನಿಗೆ ವಿಧೇಯರಾಗಿ ಇರುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡು.


ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.


ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.


ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.


ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು