Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:23 - ಕನ್ನಡ ಸತ್ಯವೇದವು C.L. Bible (BSI)

23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟನು. ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದರು. “ಬೋಳು ತಲೆಯವನೇ, ಏರು; ಬೋಳುತಲೆಯವನೇ ಏರು,” ಎಂದು ಕೂಗಿ ಅವನನ್ನು ಅಣಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದು - ಬೋಳಮಂಡೆಯವನೇ, ಏರು; ಬೋಳಮಂಡೆಯವನೇ, ಏರು ಎಂದು ಕೂಗಿ ಅವನನ್ನು ಪರಿಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿರುವಾಗ, ಚಿಕ್ಕ ಹುಡುಗರು ಪಟ್ಟಣದಿಂದ ಹೊರಟುಬಂದು ಅವನನ್ನು ಹಾಸ್ಯಮಾಡಿ ಅವನಿಗೆ, “ಬೋಳು ತಲೆಯವನೇ, ಏರಿ ಹೋಗು; ಬೋಳು ತಲೆಯವನೇ, ಏರಿ ಹೋಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:23
34 ತಿಳಿವುಗಳ ಹೋಲಿಕೆ  

ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


“ಈಗಲಾದರೊ ನನಗಿಂತ ಚಿಕ್ಕವರು ನನ್ನನ್ನು ಪರಿಹಾಸ್ಯಮಾಡುತ್ತಾರೆ. ಇವರ ಹೆತ್ತವರು ನನ್ನ ಮುಂದೆ. ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆ.


ಚಿಕ್ಕವರು ಕೂಡ ನನ್ನನು ತಿರಸ್ಕರಿಸುತ್ತಾರೆ ನಾನು ಕಾಣಿಸಿಕೊಂಡಾಗಲೆಲ್ಲ ಹಾಸ್ಯಮಾಡುತ್ತಾರೆ.


ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ಅಂದು ಪ್ರಕೃತಿಸಹಜವಾಗಿ ಹುಟ್ಟಿದವನು ದೇವರಾತ್ಮದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆ ಇಂದೂ ನಡೆಯುತ್ತದೆ.


ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”


ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.


ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು.


ಬೇತೇಲಿನ ಜನರೇ, ನಿಮಗೂ ಇಂಥ ದುರ್ಗತಿಯೇ ಸಂಭವಿಸಲಿರುವುದು. ಬೆಳಗಾಗುವುದರೊಳಗೆ ಇಸ್ರಯೇಲಿನ ರಾಜನು ಹತನಾಗುವನು. ಕಾರಣ, ನಿಮ್ಮ ಅಕ್ರಮವು ಘೋರವಾದುದು!”


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.


ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.


ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ.


ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.


ಹುಡುಗನಾದರೂ ನಡತೆಯಲ್ಲೇ ತೋರ್ಪಡಿಸಿಕೊಳ್ಳುವನು ತನ್ನ ಗುಣ ಶುದ್ಧವೋ, ಸತ್ಯವೋ ಎಂಬುದನ್ನು.


ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II


ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ಒಬ್ಬ ವ್ಯಕ್ತಿಯ ತಲೆಯ ಕೂದಲು ಉದುರಿಹೋದುದರಿಂದ ಬೋಳುತಲೆಯವನಾದರೂ ಅವನು ಶುದ್ಧನೇ.


ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು. ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಶುದ್ಧವಾಗಿದೆ.


ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II


ದಾರಿಯಲ್ಲಿ ಎಲೀಯನು ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಎಲೀಷನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾರೆ,” ಎಂದು ಉತ್ತರಕೊಟ್ಟನು. ಬಳಿಕ ಅವರಿಬ್ಬರೂ ಬೇತೇಲಿಗೆ ಹೋದರು.


ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.


ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು