Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:24 - ಕನ್ನಡ ಸತ್ಯವೇದವು C.L. Bible (BSI)

24 ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:24
28 ತಿಳಿವುಗಳ ಹೋಲಿಕೆ  

ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.


ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು.


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು.


ಅದಕ್ಕೆ ಪೇತ್ರನು, “ನಿನ್ನ ಹಣಕಾಸು ನಿನ್ನೊಂದಿಗೆ ಹಾಳಾಗಿಹೋಗಲಿ; ದೇವರ ವರವನ್ನು ಹಣಕ್ಕೆ ಕೊಳ್ಳಬೇಕೆಂದಿರುವೆಯಾ?


ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.


ಯೇಸು ಆ ಮರಕ್ಕೆ, “ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ,” ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು.


ಅವರ ಮನಸ್ಸನ್ನು ಮಂಕುಮಾಡು ಅವರಿಗೆ ನಿನ್ನ ಶಾಪ ತಗಲುವಂತೆ ಮಾಡು.


ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.


ಆಗ ಆ ಪ್ರವಾದಿ ಅವನಿಗೆ, “ನೀನು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ನನ್ನನ್ನು ಬಿಟ್ಟು ಹೊರಟಕೂಡಲೆ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು,” ಎಂದನು. ಅಂತೆಯೇ ಅವನು ಇವನನ್ನು ಬಿಟ್ಟುಹೋದ ಕೂಡಲೆ, ಒಂದು ಸಿಂಹವು ಬಂದು ಅವನನ್ನು ಕೊಂದುಹಾಕಿತು.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ತಮ್ಮ ತಂದೆ ಮತ್ತು ಅವನ ಜನರೂ ಶೂರರಾಗಿದ್ದಾರೆಂದೂ, ಈಗಲಾದರೋ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷ ಉಳ್ಳವರಾಗಿದ್ದಾರೆಂದೂ ತಮಗೆ ಗೊತ್ತುಂಟಲ್ಲವೆ? ಇದಲ್ಲದೆ ತಮ್ಮ ತಂದೆ ಯುದ್ಧ ನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವುದಿಲ್ಲ.


ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”


ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.


ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.


ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”


ಎಲೀಷನು ಅಲ್ಲಿಂದ ಕಾರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರಿಯಕ್ಕೆ ಬಂದನು.


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು