Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರನ್ನು ಹಿಂಬಾಲಿಸಿಕೊಂಡು ಬಂದ ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಅಲ್ಲಿದ್ದರು. ಎಲೀಯ ಮತ್ತು ಎಲೀಷರು ಜೋರ್ಡನ್ ನದಿಯ ಹತ್ತಿರ ನಿಂತುಕೊಂಡರು. ಆ ಐವತ್ತು ಮಂದಿ ಜನರು ಎಲೀಯ ಮತ್ತು ಎಲೀಷರಿಗಿಂತ ಬಹುದೂರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:7
12 ತಿಳಿವುಗಳ ಹೋಲಿಕೆ  

ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವುದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತುಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.


ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ತಮಗೆ ತಿಳಿಸಲಾಗಿದೆ ಅಲ್ಲವೆ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಹೋಗಿ ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ?


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು.


ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.


ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳ ಬಹಳ ಇಕ್ಕಟ್ಟಾಗಿದೆ.


ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.


ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು