Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:20 - ಕನ್ನಡ ಸತ್ಯವೇದವು C.L. Bible (BSI)

20 ಹಿಜ್ಕೀಯನ ಉಳಿದ ಚರಿತ್ರೆ, ಅವನ ಪರಾಕ್ರಮಕಾರ್ಯ ಹಾಗು ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರ, ಇವು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹಿಜ್ಕೀಯನ ಇತರ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ ಅವನು ಕೆರೆ ಮತ್ತು ಕಾಲುವೆಗಳನ್ನು ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರಮಾಡಿದ್ದೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:20
18 ತಿಳಿವುಗಳ ಹೋಲಿಕೆ  

ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.


ಹಿಜ್ಕೀಯನ ಉಳಿದ ಚರಿತ್ರೆಯನ್ನೂ ಅವನ ಭಕ್ತಿಕಾರ್ಯಗಳನ್ನೂ ಆಮೋಚನ ಮಗ ಯೆಶಾಯನ ದರ್ಶನ ಗ್ರಂಥದಲ್ಲಿ ಹಾಗು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಬರೆಯಲಾಗಿದೆ.


ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಸ್ಸೀರಿಯದ ರಾಜನಿಗೆ ಬೇಕಾದಷ್ಟು ನೀರು ಏಕೆ ಸಿಕ್ಕಬೇಕು?,” ಎಂದುಕೊಂಡು ಎಲ್ಲಾ ಬಾವಿಗಳನ್ನೂ ನಾಡಿನ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.


ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪೂರ್ವದಿಕ್ಕಿನ ಕಣಿವೆಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲ ಕಾರ್ಯಗಳಲ್ಲೂ ಯಶಸ್ವಿ ಆದನು.


ಆಹಾಜನ ಉಳಿದ ಚರಿತ್ರೆ ಹಾಗು ಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಪೆಕಹ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅಜರ್ಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೆಹೋರಾಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಜುದೇಯದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಆಸನ ಉಳಿದ ಚರಿತ್ರೆ, ಅವನ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಹಾಗು ಅವನ ಇತರ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗ ತಗಲಿತು.


ಅಬೀಯಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.


ಯಾರೊಬ್ಬಾಮನ ಇತರ ಕಾರ್ಯಕಲಾಪಗಳು, ಅವನ ಯುದ್ಧಗಳು ಹಾಗು ರಾಜ್ಯಭಾರಗಳ ವಿವರವು, ‘ಇಸ್ರಯೇಲ್ ರಾಜರ ಇತಿಹಾಸ’ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು ಅರಸನ ಕೊಳಕ್ಕೆ ಹೋದೆ.


ರೆಹಬ್ಬಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೋಷೀಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಪ್ರಮುಖರ ಮತ್ತು ಶೂರರ ಮುಂದೆ ಆ ಪ್ರಸ್ತಾಪವೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.


ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು