Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:6 - ಕನ್ನಡ ಸತ್ಯವೇದವು C.L. Bible (BSI)

6 ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು; ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು ಎಂಬದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿನ್ನ ಜೀವಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಾನು ನಿನ್ನನ್ನು ಮತ್ತು ಈ ನಗರವನ್ನು ಅಶ್ಶೂರದ ರಾಜನ ಅಧಿಕಾರದಿಂದ ರಕ್ಷಿಸುತ್ತೇನೆ. ನಾನು ಈ ನಗರವನ್ನು ಸಂರಕ್ಷಿಸುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದಕ್ಕಾಗಿಯೂ ನನಗಾಗಿಯೂ ಇದನ್ನು ಮಾಡುತ್ತೇನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ. ನಿನ್ನನ್ನೂ, ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ, ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:6
7 ತಿಳಿವುಗಳ ಹೋಲಿಕೆ  

ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ".


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;


ಪ್ರಭು ಅಲ್ಪವೆಂದೆಣಿಸನು I ತನ್ನ ಭಕ್ತರ ಮರಣವನು II


ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.


ಯೆಶಾಯನು ಒಂದು ಅಂಜೂರದ ಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು