Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:2 - ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಇಸ್ರೇಲರು ತಮ್ಮ ದೇಶಕ್ಕೆ ಬಂದಾಗ ಯೆಹೋವನು ಹೊರಗಟ್ಟಿದ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಮನಸ್ಸೆಯು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:2
20 ತಿಳಿವುಗಳ ಹೋಲಿಕೆ  

“ಸಮಾರಿಯ ಎಂಬಾಕೆ ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.


ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”


ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ


ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.


“ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;


ಅವನು ತನ್ನ ತಂದೆ ಮನಸ್ಸೆಯ ದುರ್ಮಾರ್ಗದಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ತನ್ನ ತಂದೆಯಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!


ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”


ಇವನು ತನ್ನ ಪೂರ್ವಿಕರಾದ ಇಸ್ರಯೇಲಿನ ಅರಸರಷ್ಟು ಕೆಟ್ಟವನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ತನ್ನ ಪೂರ್ವಜರ ದೇವರಾದ ಸರ್ವೇಶ್ವರನನ್ನೂ ಅವರು ಮೆಚ್ಚುವ ಮಾರ್ಗವನ್ನೂ ಬಿಟ್ಟು ತನ್ನ ತಂದೆಯ ಮಾರ್ಗದಲ್ಲೇ ನಡೆದನು.


ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು