Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕಾಗಿ ಆರಿಸಿಕೊಂಡ ಯೆರೂಸಲೇವಿುನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:4
18 ತಿಳಿವುಗಳ ಹೋಲಿಕೆ  

ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.


ಇದಲ್ಲದೆ, ನನಗೆ ಈ ಅಪರಾಧವನ್ನು ನಡೆಸಿದ್ದಾರೆ: ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಶುದ್ಧ ಮಾಡಿದರು.


ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.


ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.


ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ಸರ್ವೇಶ್ವರನ ನುಡಿ : “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರಮಾಡಿದರು; ಹೌದು, ನನ್ನ ಮಂದಿರದ ನಟ್ಟನಡುವೆ ಇದನ್ನು ನಡೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು