Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:9 - ಕನ್ನಡ ಸತ್ಯವೇದವು C.L. Bible (BSI)

9 ಆದರೆ ಇಸ್ರಯೇಲರು ಅವರ ಮಾತನ್ನು ಕೇಳದೆ, ಮನಸ್ಸೆಯಿಂದ ಪ್ರೇರಿತರಾಗಿ, ತಮ್ಮ ಮುಂದೆಯೇ ಸರ್ವೇಶ್ವರನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಇಸ್ರಾಯೇಲ್ಯರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಆ ಜನಾಂಗಗಳನ್ನು ನಾಶಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಜನರು ಕೇಳದೆ ಹೋದರು. ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:9
25 ತಿಳಿವುಗಳ ಹೋಲಿಕೆ  

ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಒಬ್ಬನು ಒಳ್ಳೆಯದನ್ನು ಮಾಡಬೇಕೆಂದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.


ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


“ಆದರೆ ನೀನು ನಡೆದ ದುರ್ಮಾರ್ಗ ಅವರು ನಡೆದಂಥದಲ್ಲ. ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ. ಅವರ ದುರ್ನಡತೆ ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.


“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II


ಆಗ ಸರ್ವೇಶ್ವರ ತನ್ನ ದಾಸರಾದ ಪ್ರವಾದಿಗಳ ಮುಖಾಂತರ.


ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.


ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ ಹೋದರು. “ಅದಿರಲಿ; ನಮಗೆ ಅರಸನನ್ನು ಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು.


ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು