Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:11 - ಕನ್ನಡ ಸತ್ಯವೇದವು C.L. Bible (BSI)

11 ಅರಸನು ಧರ್ಮೋಪದೇಶ ಗ್ರಂಥವಾಕ್ಯಗಳನ್ನು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನು ಧರ್ಮೋಪದೇಶಗ್ರಂಥವಾಕ್ಯಗಳನ್ನು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:11
12 ತಿಳಿವುಗಳ ಹೋಲಿಕೆ  

ಅರಸ ಯೋಷೀಯನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ,


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ಇದಲ್ಲದೆ ಯಾಜಕ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಆ ಎಲ್ಲ ಮಾತುಗಳನ್ನು ಅವರು ಕೇಳಿ ತಳಮಳಗೊಂಡು ಒಬ್ಬರನ್ನೊಬ್ಬರು ನೋಡಿದರು. “ನಾವು ಈ ಮಾತುಗಳನ್ನೆಲ್ಲ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು