Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:2
18 ತಿಳಿವುಗಳ ಹೋಲಿಕೆ  

ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


ಇವನು ಎಲ್ಲಾ ವಿಷಯಗಳಲ್ಲೂ ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ಚಿತ್ತಾನುಸಾರ ನಡೆದನು.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ಹುಡುಗನಾದರೂ ನಡತೆಯಲ್ಲೇ ತೋರ್ಪಡಿಸಿಕೊಳ್ಳುವನು ತನ್ನ ಗುಣ ಶುದ್ಧವೋ, ಸತ್ಯವೋ ಎಂಬುದನ್ನು.


ತಿರುಗಬೇಡ ಎಡಕ್ಕಾಗಲಿ, ಬಲಕ್ಕಾಗಲಿ; ಕೇಡಿನಿಂದ ನಿನ್ನ ಕಾಲು ದೂರವಿರಲಿ.


ಅವನು ಎಲ್ಲಾ ವಿಷಯಗಳಲ್ಲೂ ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ಚಿತ್ತಾನುಸಾರ ನಡೆದನು.


ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಜ ದಾವೀದನ ಮಾರ್ಗವನ್ನು ಬಿಟ್ಟು


ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.


ಬಾಳ್‍ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು.


ಜೆರುಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದರು.


ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು.


ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು.


ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).


ಇವನು ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಇವನು ತನ್ನ ತಂದೆ ಯೆಹೋವಾಷನ ಸನ್ಮಾರ್ಗದಲ್ಲಿ ತಪ್ಪದೆ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾದನು. ಆದರೂ ತನ್ನ ಪೂರ್ವಜ ದಾವೀದನಷ್ಟು ಉತ್ತಮನಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು