Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:4 - ಕನ್ನಡ ಸತ್ಯವೇದವು C.L. Bible (BSI)

4 “ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ - ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಷೀಯನು, “ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ದ್ವಾರಪಾಲಕರು ಜನರಿಂದ ಒಟ್ಟುಗೂಡಿಸಿರುವ ಹಣವನ್ನು ಅವನು ಲೆಕ್ಕಿಸಲಿ. ಜನರು ದೇವಾಲಯಕ್ಕೆ ತೆಗೆದುಕೊಂಡು ಬಂದು ಕೊಟ್ಟ ಹಣವೇ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ಅವನು ಯೆಹೋವ ದೇವರ ಆಲಯದ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:4
14 ತಿಳಿವುಗಳ ಹೋಲಿಕೆ  

ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ದ್ವಾರಪಾಲಕರಲ್ಲಿ - ಅಕ್ಕೂಬ್‍ ಟಲ್ಮೋನರೂ ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ; ಒಟ್ಟು ನೂರೆಪ್ಪತ್ತೆರಡು ಮಂದಿ.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಕೋರೇಯನ ಮಗನೂ ಎಬ್ಯಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನು ಹಾಗೂ ಕೋರಹನ ಗೋತ್ರದ ಸದಸ್ಯರು, ದೇವದರ್ಶನದ ಗುಡಾರದ ದ್ವಾರವನ್ನು ಕಾಯುವ ಜವಬ್ದಾರಿ ವಹಿಸಿಕೊಂಡು ಇದ್ದರು.ಅವರ ಪೂರ್ವಜರು ಸಹ ಸರ್ವೇಶ್ವರನ ಗುಡಾರವನ್ನು ಕಾಯುವವರಾಗಿದ್ದರು.


ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಅಲ್ಲಿಗೆ ಬಂದರು.


ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು