Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:26 - ಕನ್ನಡ ಸತ್ಯವೇದವು C.L. Bible (BSI)

26 ಆದರೂ ಮನಸ್ಸೆಯ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲಿದ್ದ ಸರ್ವೇಶ್ವರನ ಉಗ್ರಕೋಪ ಇಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:26
13 ತಿಳಿವುಗಳ ಹೋಲಿಕೆ  

ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ನಿರಪರಾಧಿಗಳ ಹತ್ಯೆಯಿಂದ ಜೆರುಸಲೇಮನ್ನು ರಕ್ತಮಯವಾಗಿಸಿದ್ದ ಮನಸ್ಸೆಯ ದುಷ್ಕೃತ್ಯಗಳನ್ನು ಸರ್ವೇಶ್ವರ ಕ್ಷಮಿಸದೆ ಹೋದರು;


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಆದುದರಿಂದ ನಮ್ಮ ಮುಂದಾಳುಗಳು ಸರ್ವಸಮೂಹದ ಪರವಾಗಿ ಈ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರು, ನೇಮಿತ ದಿನದಲ್ಲಿ, ತಮ್ಮ ಊರಿನ ಹಿರಿಯರೊಡನೆ ಹಾಗು ನ್ಯಾಯಾಧಿಪತಿಗಳೊಡನೆ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಬಗ್ಗೆ ತಾಳಿರುವ ಉಗ್ರಕೋಪ ಹೀಗೆ ಪರಿಹಾರವಾಗಲಿ,” ಎಂದು ಉತ್ತರಕೊಟ್ಟರು.


ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ಯೋಷೀಯನು ಮಹಾದೇವಾಲಯದ ವಿಷಯದಲ್ಲಿ ಈ ಎಲ್ಲ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ರಾಜ ನೆಕೋ ಎಂಬುವನು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು