Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:29 - ಕನ್ನಡ ಸತ್ಯವೇದವು C.L. Bible (BSI)

29 ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನ ಕಾಲದಲ್ಲಿ ಐಗುಪ್ತದ ಅರಸನಾದ ಫರೋಹ ನೆಕೋ ಎಂಬವನು ಅಶ್ಶೂರದ ಅರಸನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಕೂಡಲೆ ಅವನಿಂದ ಹತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:29
24 ತಿಳಿವುಗಳ ಹೋಲಿಕೆ  

ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:


ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಲೋಕದಲ್ಲಿ ನಡೆಯುವ ನಿರರ್ಥಕ ಕಾರ್ಯ ಒಂದುಂಟು; ದುರ್ಜನರ ನಡತೆಗೆ ಆಗಬೇಕಾದ ತಕ್ಕ ಶಿಕ್ಷೆ ಸಜ್ಜನರಿಗೆ ಆಗುತ್ತದೆ. ಸಜ್ಜನರಿಗೆ ಸಿಗಬೇಕಾದ ಸಂಭಾವನೆ ದುರ್ಜನರಿಗೆ ಸಿಗುತ್ತದೆ. ಇದು ನಿರರ್ಥಕವೆಂದೇ ಹೇಳುತ್ತೇನೆ.


ಬಾಬಿಲೋನಿನ ಅರಸನು ಈಜಿಪ್ಟಿನ ಪ್ರವಾಹಕ್ಕೂ ಯೂಫ್ರಟಿಸ್ ನದಿಗೂ ಮಧ್ಯದಲ್ಲಿದ್ದ ಈಜಿಪ್ಟ್ ರಾಜನ ಎಲ್ಲಾ ದೇಶವನ್ನು ಸ್ವಾಧೀನ ಮಾಡಿಕೊಂಡನು. ಅಂದಿನಿಂದ ಈಜಿಪ್ಟಿನ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.


ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದುದರಿಂದ ಇಸ್ರಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಜುದೇಯ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.


ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಯೇಲರ ಅರಸನೂ ಆದ ಯೋವಾಷನ ಬಳಿಗೆ ದೂತರನ್ನು ಕಳುಹಿಸಿದನು. ಅವನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿಸಿದನು.


ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ಯೋಷೀಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


“ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು:


“ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!


ಜುದೇಯದ ಅರಸನಾದ ಯೋಷೀಯನ ಮಗನೂ ತನ್ನ ತಂದೆ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಹಾಗು ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಸರ್ವೇಶ್ವರ ಹೇಳುವುದು ಏನೆಂದರೆ:


“ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದಿಲ್ಲ. ಅವನನ್ನು ಎಲ್ಲಿಗೆ ಸೆರೆ ಒಯ್ದರೋ ಅಲ್ಲೇ ಅವನು ಸಾಯುವನು. ಈ ನಾಡನ್ನು ಇನ್ನು ಅವನು ನೋಡುವುದಿಲ್ಲ.”


“ವೇಗಶಾಲಿಗಳು ಓಡಿಹೋಗಲಾರರು ಬಲಿಷ್ಟರು ತಪ್ಪಿಸಿಕೊಳ್ಳಲಾರರು. ಉತ್ತರದಲ್ಲಿ, ಯೂಫ್ರೆಟಿಸ್ ನದಿಯ ಹತ್ತಿರದಲ್ಲಿ, ಎಡವಿಬಿದ್ದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು