Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:4 - ಕನ್ನಡ ಸತ್ಯವೇದವು C.L. Bible (BSI)

4 ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:4
35 ತಿಳಿವುಗಳ ಹೋಲಿಕೆ  

ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿದನು. ಬಾಳ್‍ದೇವತೆಗಳಿಗಾಗಿ ಬಲಿಪೀಠಗಳನ್ನು ಕಟ್ಟಿಸಿದನು; ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.


ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಇತ್ತ ಮುಖ್ಯಯಾಜಕರು ಮತ್ತು ಪ್ರಜಾಪ್ರಮುಖರು ‘ಕಾಯಫ’ ಎಂಬ ಪ್ರಧಾನ ಯಾಜಕನ ಭವನದಲ್ಲಿ ಒಟ್ಟುಗೂಡಿದರು.


ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;


ಇದಲ್ಲದೆ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಬಲಿಪೀಠವನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.


“ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.


ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು;


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.


ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.


ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು.


ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿದನು; ಇನ್ನೊಂದನ್ನು ದಾನಿಗೆ ಕಳುಹಿಸಿದನು.


ಇವರೆಲ್ಲರೂ ಬಹಳವಾಗಿ ನಡೆಯುವಾಗ ಸುತ್ತ-ಮುತ್ತಿನವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.


ಅವರು ಸರ್ವೇಶ್ವರನನ್ನು ಬಿಟ್ಟು ‘ಬಾಳ್ ಅಷ್ಟೋರೆತ್’ ಎಂಬ ದೇವತೆಗಳನ್ನು ಪೂಜಿಸತೊಡಗಿದರು.


ಸರ್ವ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.


ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ಇವನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿ ಆ ಮೂರ್ತಿಯನ್ನು ಕಡಿದು ಕಿದ್ರೋನ್ ಹಳ್ಳದ ಹತ್ತಿರ ಸುಡಿಸಿದನು.


ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ ಅಲ್ಲಿನ ವಿಗ್ರಹಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.


ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,


ಅರಸನಾದ ಆಸನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದ್ದಳು. ಆದ್ದರಿಂದ ಅವನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ತೆಗೆಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.


“ಜುದೇಯ ನಾಡನ್ನೂ ಜೆರುಸಲೇಮಿನ ನಿವಾಸಿಗಳೆಲ್ಲರನ್ನೂ ಕೈಯೆತ್ತಿ ಸದೆಬಡಿಯುವೆನು; ಬಾಳನ ಪೂಜೆಪುರಸ್ಕಾರಗಳ ಗುರುತೂ ಅಲ್ಲಿ ಇಲ್ಲದಂತೆ ಮಾಡುವೆನು. ಅವನ ಪೂಜಾರಿಗಳನ್ನು ನಿರ್ನಾಮಗೊಳಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು