Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನ ಆಲಯದ ಪ್ರಾಕಾರದೊಳಗಿದ್ದ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗಾಗಿ ಬಟ್ಟೆಬರೆಗಳನ್ನು ನೇಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗೋಸ್ಕರ ಗುಡಾರಗಳನ್ನು ನೇಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಂತರ ರಾಜನಾದ ಯೋಷೀಯನು ದೇವಾಲಯದಲ್ಲಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸುಳ್ಳುದೇವತೆಯಾದ ಅಶೇರಳಿಗೋಸ್ಕರ ಚಿಕ್ಕ ಗುಡಾರಗಳನ್ನು ನೇಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಅಶೇರದೇವತೆಗಾಗಿ ನೇಯ್ಗೆ ಕೆಲಸ ಮಾಡುತ್ತಿದ್ದ ಸ್ತ್ರೀಯರ ಹಾಗೂ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:7
14 ತಿಳಿವುಗಳ ಹೋಲಿಕೆ  

ನೀನು ಪುಣ್ಯಕ್ಷೇತ್ರಗಳನ್ನು ನಿರ್ಮಿಸಿ, ನಿನ್ನ ನಾನಾ ಶೈಲಿಯ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ, ಹಿಂದೆಂದೂ ನಡೆಯದಂತಹ, ಮುಂದೆ ಎಂದೂ ನಡೆಯಬಾರದಂತಹ ವ್ಯಭಿಚಾರವನ್ನು ನಡೆಸಿದೆ.


ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.


ಇದಲ್ಲದೆ, ಅವರ ನಾಡಿನಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿದ್ದ ಗಂಡಸರೂ ಹೆಂಗಸರೂ ಇದ್ದರು. ಅವರ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳ ದುರಾಚಾರಗಳನ್ನೆಲ್ಲಾ ಅವರೂ ನಡೆಸುತ್ತಿದ್ದರು.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ನನ್ನನ್ನು ಸರ್ವೇಶ್ವರನ ಆಲಯದ ಉತ್ತರ ಬಾಗಿಲ ಮುಂದಕ್ಕೆ ಕರೆತಂದರು; ಇಗೋ, ಅಲ್ಲಿ ಹೆಂಗಸರು ‘ತಮ್ಮೂಜ್’ ದೇವತೆಗಾಗಿ ಅಳುತ್ತಾ ಕುಳಿತಿದ್ದರು.


ಯೋಷೀಯನು ಇಸ್ರಯೇಲರಿಗೆ ಸೇರಿದ ಎಲ್ಲಾ ಪ್ರಾಂತಗಳಿಂದ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಸರ್ವೇಶ್ವರನನ್ನು ಅವಲಂಬಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಡದೆ ಹಿಂಬಾಲಿಸಿದರು.


ಇವನು ತನ್ನ ತಂದೆ ಆಸನ ಕಾಲದಲ್ಲಿ ತಪ್ಪಿಸಿಕೊಂಡ ಹೆಣ್ಣು-ಗಂಡು ವೇಶ್ಯೆಯರನ್ನು ನಾಡಿನಿಂದ ತೆಗೆದುಹಾಕಿದನು.


“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.


ಇಸ್ರಯೇಲರು ಶಿಟ್ಟೀಮಿನಲ್ಲಿ ವಾಸಮಾಡುತ್ತಿದ್ದಾಗ ಮೋವಾಬ್ ಮಹಿಳೆಯರೊಡನೆ ಸಹವಾಸ ಮಾಡತೊಡಗಿದರು.


ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ.


ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು