Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:15 - ಕನ್ನಡ ಸತ್ಯವೇದವು C.L. Bible (BSI)

15 ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಯೆಹೋಯಾಖೀನನನ್ನೂ ಅವನ ತಾಯಿ ಹೆಂಡತಿಯರು ಕಂಚುಕಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಸೆರೆಯಾಳಾಗಿ ಬಾಬಿಲೋನಿಗೆ ಕರೆದೊಯ್ದನು. ನೆಬೂಕದ್ನೆಚ್ಚರನು ರಾಜನ ತಾಯಿಯನ್ನು, ಅವನ ಪತ್ನಿಯರನ್ನು, ಅಧಿಕಾರಿಗಳನ್ನು ಮತ್ತು ದೇಶದ ಪ್ರತಿಷ್ಠಿತರನ್ನು ಕರೆದೊಯ್ದನು. ನೆಬೂಕದ್ನೆಚ್ಚರನು ಅವರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳನ್ನಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅರಸನ ತಾಯಿಯನ್ನೂ, ಅರಸನ ಹೆಂಡತಿಯರನ್ನೂ, ಅವನ ಅಧಿಕಾರಿಗಳನ್ನೂ, ದೇಶದ ಪ್ರತಿಷ್ಠಿತರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:15
18 ತಿಳಿವುಗಳ ಹೋಲಿಕೆ  

ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಂದ ಸೆರೆಹಿಡಿಯಲಾದ ಯೆಹೂದ ಅರಸನಾದ ಯೆಕೋನ್ಯನ ಸಂಗಡ ಜೆರುಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಇವನೂ ಒಬ್ಬನಾಗಿದ್ದನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


“ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ;


ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಜೆರುಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆ ಇವನ ತಾಯಿ.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ, ಜುದೇಯದ ಅರಸ ಯೆಹೋಯಾಖೀನನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಸೆರೆಯಿಂದ ಬಿಡಿಸಿ ಉದ್ಧಾರ ಮಾಡಿದನು.


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ಅರಸ ಯೆಕೋನ್ಯನು, ರಾಜಮಾತೆಯು, ಕಂಚುಕಿಗಳು, ಜುದೇಯದ ಮತ್ತು ಜೆರುಸಲೇಮಿನ ಪದಾಧಿಕಾರಿಗಳು, ಶಿಲ್ಪಿಗಳು, ಕಮ್ಮಾರರು, ಇವರೆಲ್ಲರು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.


ಒಯ್ದವು ಅದನ್ನು ಬಾಬಿಲೋನಿನ ಅರಸನ ಬಳಿಗೆ ಬಿಗಿದು ಸರಪಣಿ, ಹಾಕಿ ಪಂಜರದೊಳಗೆ. ಅದರ ಗರ್ಜನೆ ಇಸ್ರಯೇಲಿನ ಗಿರಿಗಳಿಗೆ ಕೇಳಿಸದಂತೆ, ಸೇರಿಸಿಬಿಟ್ಟವು ಅದನ್ನು ಸುಭದ್ರ ಕೋಟೆಯೊಳಗೆ.


ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಯೇಲರಲ್ಲಿ, ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ ಕೆಲವು ಯುವಕರನ್ನು ಇಲ್ಲಿಗೆ ಕರೆದು ಬಾ.


ಬಾಬಿಲೋನಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,’ ಎನ್ನುತ್ತಾರೆ,” ಎಂದು ಹೇಳಿದನು.


ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.


ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.


ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.


ಶೂಷನ್ ನಗರದಲ್ಲಿ ಮೊರ್ದೆಕೈ ಎಂಬ ಯೆಹೂದ್ಯನೊಬ್ಬನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗಿಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.


ನೆಬೂಕದ್ನೆಚ್ಚರನು ಸೆರೆಗೆ ಒಯ್ದವರ ಲೆಕ್ಕದ ಪಟ್ಟಿ ಹೀಗಿದೆ; ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು,


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಗಲ ಹಾಗು ಉದ್ದವಾದ ರೆಕ್ಕೆಗಳುಳ್ಳ ವಿವಿಧ ವರ್ಣದ ಗರಿಗಳಿಂದ ಕೂಡಿದ ದೊಡ್ಡ ಹದ್ದೊಂದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ತುದಿಯ ರೆಂಬೆಯನ್ನು ಕಿತ್ತಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು