Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:23 - ಕನ್ನಡ ಸತ್ಯವೇದವು C.L. Bible (BSI)

23 ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 [ತಪ್ಪಿಸಿಕೊಂಡು ಉಳಿದಿದ್ದ] ಯೆಹೂದ ಸೇನಾಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇವಿುಸಲ್ಪಟ್ಟನೆಂಬ ವರ್ತಮಾನವನ್ನು ಕೇಳಿ ತಮ್ಮ ಜನರೊಡನೆ ವಿುಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು. ಅವರು ಯಾರಂದರೆ - ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:23
6 ತಿಳಿವುಗಳ ಹೋಲಿಕೆ  

ಮಿಚ್ಫೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,‌


ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,


ಗೆದಲ್ಯನು ಇವರಿಗೂ ಇವರ ಜನರಿಗೂ, “ಬಾಬಿಲೋನಿಯಾದ ಸೈನ್ಯದವರಿಗೆ ಹೆದರಬೇಡಿ; ಬಾಬಿಲೋನಿನ ಅರಸನಿಗೆ ಅಧೀನರಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಶುಭವಾಗುವುದು,” ಎಂದು ಆಣೆಯಿಟ್ಟು ಹೇಳಿದನು.


ಯೆರೆಮೀಯನು ಉತ್ತರಕೊಡದೆ ಇರಲು ನೆಬೂಜರದಾನನು ಅವನಿಗೆ, “ಬಾಬಿಲೋನಿಯದ ಅರಸನು, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಜುದೇಯದ ನಗರಗಳಿಗೆ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆ. ಅವನ ಬಳಿಗೆ ಹೋಗು, ಅವನ ಹತ್ತಿರ ಜನರ ನಡುವೆ ವಾಸಮಾಡುವ ಇಲ್ಲವೆ ಎಲ್ಲಿಗೆ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು