Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:29 - ಕನ್ನಡ ಸತ್ಯವೇದವು C.L. Bible (BSI)

29 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ, ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಎವೀಲ್ಮೆರೋದಕನು ಯೆಹೋಯಾಖೀನನ ಸೆರೆವಾಸದ ಬಟ್ಟೆಗಳನ್ನು ತೆಗೆಸಿ ಹೊಸ ಬಟ್ಟೆಗಳನ್ನು ತೊಡಿಸಿದನು. ಯೆಹೋಯಾಖೀನನು ಬದುಕಿರುವ ತನಕ ತನ್ನ ಪಂಕ್ತಿಯಲ್ಲಿ ಊಟಮಾಡಲು ಎವೀಲ್ಮೆರೋದಕನು ಅವಕಾಶ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:29
12 ತಿಳಿವುಗಳ ಹೋಲಿಕೆ  

ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು.


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.


ಎಸ್ತೇರಳ ದಾಸಿಯರೂ ಕಂಚುಕಿಗಳೂ ಈ ವಿಷಯವನ್ನು ಆಕೆಗೆ ತಿಳಿಸಿದಾಗ ಆಕೆ ಬಹು ವ್ಯಸನಾಕ್ರಾಂತಳಾದಳು. ಉಟ್ಟ ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಮೊರ್ದೆಕೈಗೆ ಉಡುಪನ್ನು ಕಳುಹಿಸಿಕೊಟ್ಟಳು. ಅವನಾದರೋ ಅವುಗಳನ್ನು ಸ್ವೀಕರಿಸಲಿಲ್ಲ.


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಇದನ್ನು ಕೇಳಿದ ಫರೋಹನು ಜೋಸೆಫನನ್ನು ಕರೆತರುವಂತೆ ಆಳುಗಳನ್ನು ಕಳಿಸಿದ. ಅವರು ಬಂದು ಅವನನ್ನು ಸೆರೆಯಿಂದ ತ್ವರೆಯಾಗಿ ಬಿಡುಗಡೆ ಮಾಡಿದರು. ಜೋಸೆಫನು ಕ್ಷೌರಮಾಡಿಕೊಂಡು, ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಯಲ್ಲಿ ಹಾಜರಾದ.


ಯೆಹೋಯಾಕೀಮನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.


“ಆದರೆ ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡು; ಅವರು ದಿನನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಏಕೆಂದರೆ ನಾನು ನಿನ್ನ ಸಹೋದರ ಅಬ್ಷಾಲೋಮನಿಂದ ತಪ್ಪಿಸಿಕೊಂಡು ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ನಿನ್ನನ್ನೂ ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು. ನೀವು ಅಲ್ಲೇ ಸಾಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು