Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:7 - ಕನ್ನಡ ಸತ್ಯವೇದವು C.L. Bible (BSI)

7 ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಅವನಿಗೆ ಬೇಡಿ ಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬೆಲಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:7
23 ತಿಳಿವುಗಳ ಹೋಲಿಕೆ  

ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಂಧಿತನಾಗಿ ಅವನ ವಶವಾಗುವೆ. ಬಾಬಿಲೋನಿನ ಅರಸನ ಸಮಕ್ಷಮದಲ್ಲಿ ನಿಲ್ಲುವೆ. ಅವನು ನಿನ್ನೊಡನೆ ಮುಖಾಮುಖಿಯಾಗಿ ಮಾತಾಡುವನು. ನೀನು ಬಾಬಿಲೋನಿಗೆ ಗಡಿಪಾರಾಗುವೆ.


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II


ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.


ನಿಮ್ಮ ಮುಂದೆ ನಡೆಯುವ ದೃಶ್ಯಗಳನ್ನು ನೋಡಿ ಹುಚ್ಚರಾಗಿಹೋಗುವಿರಿ.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.”


ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.


ನಿಮ್ಮ ಮುಖಂಡರೆಲ್ಲ ಒಟ್ಟಿಗೆ ಪಲಾಯನಗೈದರು; ಒಂದೇ ಒಂದು ಬಾಣವನ್ನು ಬಿಡುವುದಕ್ಕೆ ಮುಂಚೆ ಸೆರೆಹೋದರು. ದೂರಕ್ಕೆ ಪಲಾಯನಗೈದಿದ್ದರೂ ಅವರೆಲ್ಲರೂ ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.


ಇದನ್ನೂ ನುಡಿ, - ‘ನಾನು ನಿಮಗೆ ಮುಂಗುರುತಾಗಿದ್ದೇನೆ. ನಾನು ಮಾಡಿದಂತೆಯೇ ಅವರಿಗಾಗುವುದು: ಅವರು ವಲಸೆಯಾಗಿ ಸೆರೆಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು