Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:11 - ಕನ್ನಡ ಸತ್ಯವೇದವು C.L. Bible (BSI)

11 ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಯೇಹೋಷಾಫಾಟನು - ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿರುವದಿಲ್ಲವೋ ಎಂದು ಕೇಳಿದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲೊಬ್ಬನು ಅವನಿಗೆ - ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳಲ್ಲಿ ನಿಜವಾಗಿಯೂ ಯಾರಾದರೊಬ್ಬರು ಇಲ್ಲಿರಬೇಕು. ನಾವೇನು ಮಾಡಬೇಕೆಂದು ಯೆಹೋವನು ಹೇಳುತ್ತಾನೆ. ಅದಕ್ಕಾಗಿ ನಾವು ಆ ಪ್ರವಾದಿಯನ್ನು ಕೇಳೋಣ” ಎಂದು ಹೇಳಿದನು. ಇಸ್ರೇಲಿನ ರಾಜನ ಸೇವಕರಲ್ಲಿ ಒಬ್ಬನು, “ಶಾಫಾಟನ ಮಗನಾದ ಎಲೀಷನು ಇಲ್ಲಿಯೇ ಇದ್ದಾನೆ. ಎಲೀಷನು ಎಲೀಯನ ಸೇವಕನಾಗಿದ್ದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:11
27 ತಿಳಿವುಗಳ ಹೋಲಿಕೆ  

ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿಲ್ಲವೇ?’ ಎಂದು ಕೇಳಿದನು.


ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.


ಆದರೂ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


ದಾವೀದನು ಮತ್ತೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದನು. “ನೀನು ಅವರನ್ನು ಬೆನ್ನಟ್ಟಬೇಡ, ಸುತ್ತಿಕೊಂಡು ಹೋಗಿ ಬಾಕಾಮರಗಳಿರುವ ಆಚೆಕಡೆಯಿಂದ ಅವರ ಮೇಲೆ ದಾಳಿಮಾಡು.


“ಫಿಲಿಷ್ಟಿಯರ ಮೇಲೆ ನಾನು ದಾಳಿಮಾಡಬಹುದೊ? ನೀವು ನನಗೆ ಜಯವನ್ನು ಕೊಡುವಿರೋ", ಎಂದು ದಾವೀದನು ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸಿದನು. “ಹೌದು, ಅವರನ್ನು ಎದುರಿಸು, ನಾನು ನಿನಗೆ ಜಯವನ್ನು ಕೊಡುವೆನು,” ಎಂದು ಸರ್ವೇಶ್ವರ ಉತ್ತರಕೊಟ್ಟರು.


ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


ಎಲೀಷನು ಅಲ್ಲಿಂದ ಕಾರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರಿಯಕ್ಕೆ ಬಂದನು.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ತಿಮೊಥೇಯನ ಯೋಗ್ಯತೆಯನ್ನು ನೀವು ಬಲ್ಲಿರಿ. ತಂದೆಯೊಂದಿಗೆ ಮಗನು ದುಡಿಯುವಂತೆ, ಶುಭಸಂದೇಶದ ಸೇವೆಯಲ್ಲಿ ನನ್ನೊಂದಿಗೆ ಆತನು ದುಡಿದಿದ್ದಾನೆ.


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ.


ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:


ನೀರು ತರಿಸಿಕೊಡುತ್ತೇನೆ, ಕಾಲುತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ.


ಆದ್ದರಿಂದ ಇಸ್ರಯೇಲರ ಅರಸನು, “ಅಯ್ಯೋ, ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಸರ್ವೇಶ್ವರ ಇಲ್ಲಿಗೆ ಬರಮಾಡಿದ್ದಾರೆ,” ಎಂದು ಪರಿತಪಿಸಿದನು.


ಯೆಹೋಷಾಫಾಟನು, “ಅವನು ಹೇಗೂ ಸರ್ವೇಶ್ವರನ ಉತ್ತರವನ್ನು ತಿಳಿಸುವನು,” ಎಂದದ್ದರಿಂದ ಇಸ್ರಯೇಲ್ ಹಾಗು ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಬಂದರು.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿ ಇಲ್ಲವೇ?” ಎಂದು ಕೇಳಿದನು. ಅವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು