Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:2 - ಕನ್ನಡ ಸತ್ಯವೇದವು C.L. Bible (BSI)

2 ಇವನು ತನ್ನ ತಂದೆ ತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳ್ ದೇವತೆಯ ಗೌರವಾರ್ಥ ನಿಲ್ಲಿಸಿದ ಕಲ್ಲಿನ ಕಂಬವನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲವಾದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆಯು ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಕಂಬವನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೋರಾಮನು ಮಾಡಿದನು. ಆದರೆ ಯೋರಾಮನು ಅವನ ತಂದೆತಾಯಿಗಳಂತೆ ಇರಲಿಲ್ಲ. ಸುಳ್ಳುದೇವರಾದ ಬಾಳನನ್ನು ಪೂಜಿಸಲು ತನ್ನ ತಂದೆಯು ನಿರ್ಮಿಸಿದ್ದ ಸ್ತಂಭವನ್ನು ಅವನು ಕಿತ್ತುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆಯಂತೆ, ತನ್ನ ತಾಯಿಯಂತೆ ಮಾಡಲಿಲ್ಲ. ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:2
14 ತಿಳಿವುಗಳ ಹೋಲಿಕೆ  

ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಪೂಜಿಸಿದನು; ಯೇಹುವಾದರೋ ಅಧಿಕವಾಗಿ ಪೂಜಿಸಬೇಕೆಂದು ಇರುತ್ತಾನೆ.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಅವನು ತನ್ನ ತಂದೆ ಮನಸ್ಸೆಯ ದುರ್ಮಾರ್ಗದಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


ಅನಂತರ ಅವನು ಅರಮನೆಯೊಳಗೆ ಹೋಗಿ, ಅನ್ನಪಾನಗಳನ್ನು ತೆಗೆದುಕೊಂಡು, ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಸರಿಯಾಗಿ ಸಮಾಧಿಮಾಡಿರಿ; ಆಕೆ ರಾಜಪುತ್ರಿಯಾಗಿರುತ್ತಾಳಷ್ಟೆ,” ಎಂದು ಆಜ್ಞಾಪಿಸಿದನು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರ ಪಾಪಕ್ಕೆ ಕಾರಣವಾಗಿದ್ದನು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದುದರಿಂದ ಈ ದುರ್ಗತಿ ಸಂಭವಿಸಿತು.


ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು