Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:25 - ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಆಕೆ ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗೆ ಆಕೆಯು ಪ್ರಯಾಣಮಾಡಿ ಕರ್ಮೆಲ್‍ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು. ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:25
10 ತಿಳಿವುಗಳ ಹೋಲಿಕೆ  

ಎಲೀಷನು ಅಲ್ಲಿಂದ ಕಾರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರಿಯಕ್ಕೆ ಬಂದನು.


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.


ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು.


ಆಕೆ, “ಚಿಂತೆಯಿಲ್ಲ,” ಎಂದು ಹೇಳಿ ಕತ್ತೆಗೆ ತಡಿಹಾಕಿಸಿ, ಕುಳಿತುಕೊಂಡು ಸೇವಕನಿಗೆ, “ಹೊಡೆ, ಓಡಿಸುತ್ತಾ ಹೋಗು; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ,” ಎಂದು ಆಜ್ಞಾಪಿಸಿದಳು.


“ಅಗೋ, ಅಲ್ಲಿ ಶೂನೇಮ್ಯಳು; ನೀನು ಓಡಿಹೋಗಿ ಆಕೆಯನ್ನು ಭೇಟಿಯಾಗು; ‘ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ?’ ಎಂದು ವಿಚಾರಿಸು,” ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆ ಆ ಸೇವಕನಿಗೆ, “ಕ್ಷೇಮ,” ಎಂದು ಉತ್ತರಕೊಟ್ಟು, ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು.


ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.


ಬಳಿಕ ಅರಸನು ಎಲೀಯನನ್ನು ಕರೆದುತರುವುದಕ್ಕಾಗಿ ಒಬ್ಬ ಪಂಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡನು. “ದೈವಪುರುಷರೇ, ಇಳಿದು ಬನ್ನಿ, ಅರಸರು ತಮ್ಮನ್ನು ಕರೆಯುತ್ತಿದ್ದಾರೆ,” ಎಂದು ಆಮಂತ್ರಿಸಿದನು.


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.


ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು