Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:38 - ಕನ್ನಡ ಸತ್ಯವೇದವು C.L. Bible (BSI)

38 ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:38
34 ತಿಳಿವುಗಳ ಹೋಲಿಕೆ  

ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.


ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.


ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು.


ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.


ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರು ಕೊಡಿ,” ಎಂದರು. ಅವರು, “ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ; ನಾವು ಹೋಗಿ ಇವರೆಲ್ಲರಿಗೆ ಬೇಕಾಗುವಷ್ಟು ಊಟ ಕೊಂಡುಕೊಂಡು ಬರಬೇಕೆ?” ಎಂದರು.


ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.


ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.


ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.


ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು. ಅದಕ್ಕೆ ಶಿಷ್ಯರು, “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು.


ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;


“ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.


ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.


ಒಮ್ಮೆ ಯಕೋಬನು ಅಡಿಗೆ ಮಾಡುತ್ತಿದ್ದ. ಏಸಾವನು ಕಾಡಿನಿಂದ ದಣಿದು ಬಂದು,


ಅವರಲ್ಲಿ ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ, ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು, ಉಡಿತುಂಬಾ ಅದರ ಕಾಯಿಗಳನ್ನು ಕಿತ್ತುಕೊಂಡುಬಂದು, ತುಂಡು ತುಂಡುಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.


ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.


“ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.


ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ಚಕ್ಕೋತ ಸೊಪ್ಪುಗಳನ್ನು ಪೊದೆಗಳಿಂದ ಕಿತ್ತು ತಿನ್ನುತ್ತಿದ್ದರು ಜಾಲಿಯ ಬೇರೇ ಅವರಿಗೆ ಆಹಾರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು