Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:42 - ಕನ್ನಡ ಸತ್ಯವೇದವು C.L. Bible (BSI)

42 ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಒಂದು ದಿವಸ ಬಾಳ್‍ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲತುಂಬಾ ಹಸೀ ತೆನೆಗಳನ್ನೂ ಪ್ರಥಮ ಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ - ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:42
22 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿ ಮುಗಿದುಹೋಯಿತು. ಆ ದೈವಪುರುಷನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿ ಇಲ್ಲವಲ್ಲಾ;


ತಿಂದುಳಿದ ಆ ಐದು ರೊಟ್ಟಿಗಳ ತುಂಡುಗಳನ್ನು ಒಟ್ಟುಗೂಡಿಸಲು ಅವು ಹನ್ನೆರಡು ಬುಟ್ಟಿಗಳ ತುಂಬಾ ಆದವು.


“ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.


ಆಗ ಎಲೀಷನು, “ಸರ್ವೇಶ್ವರಸ್ವಾಮಿಯ ಈ ವಾಕ್ಯವನ್ನು ಕೇಳು: ‘ನಾಳೆ ಇಷ್ಟೇಹೊತ್ತಿಗೆ ಸಮಾರಿಯಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುವುದು’ ಎನ್ನುತ್ತಾರೆ,” ಎಂದು ಹೇಳಿದನು.


ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗು ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.


ನಿಮ್ಮಲ್ಲಿ ಆಧ್ಯಾತ್ಮಿಕ ಬೀಜವನ್ನು ಬಿತ್ತನೆಮಾಡಿದ ನಾವು ಪ್ರತಿಫಲವಾಗಿ ದೈನಂದಿನ ಅಗತ್ಯಗಳನ್ನು ಅಪೇಕ್ಷಿಸುವುದು ಅತಿಯಾಯಿತೇ?


ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.


ಆ ನಾಡಿನಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬೆ ಇವುಗಳು ಬೆಳೆಯುತ್ತವೆ; ಎಣ್ಣೆಮರಗಳು ಹಾಗು ಜೇನುತುಪ್ಪ ಸಿಕ್ಕುತ್ತವೆ.


“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ನೀನು ಹತ್ತು ರೊಟ್ಟಿಗಳನ್ನೂ ಸಿಹಿಪದಾರ್ಥಗಳನ್ನೂ ಒಂದು ಕುಪ್ಪಿ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು; ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು,” ಎಂದು ಹೇಳಿದನು.


ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು;


“ಇಸ್ರಯೇಲರು ನನಗೆ ಸಮರ್ಪಿಸುವ ಪ್ರಥಮ ಫಲಗಳು, ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ, ಇವುಗಳಲ್ಲಿ ಶ್ರೇಷ್ಠವಾದುದು ನಿನಗೇ ಸಿಗಬೇಕೆಂದು ವಿಧಿಸಿದ್ದೇನೆ.


ಆ ಜನರು ತಮ್ಮ ನಾಡಿನ ಎಲ್ಲ ಬೆಳೆಗಳಲ್ಲಿ ನನಗೆ ತರುವ ಪ್ರಥಮ ಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು