Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:11 - ಕನ್ನಡ ಸತ್ಯವೇದವು C.L. Bible (BSI)

11 ನಾಮಾನನು ಇದನ್ನು ಕೇಳಿ ಕೋಪಗೊಂಡನು . “ಇದೇನು ! ಇವನು ಖಂಡಿತ ವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರ ನ ಹೆಸರು ಹೇಳಿ, ನನ್ನ ಚರ್ಮ ದ ಮೇಲೆ ಕೈಯಾಡಿಸಿ , ರೋಗ ವಾಸಿ ಮಾಡುವನೆಂದು ನೆನಸಿದೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾಮಾನನು ಇದನ್ನು ಕೇಳಿ ಕೋಪಗೊಂಡು - ಇದೇನು! ಅವನು ಹೇಗೂ ಹೊರಗೆ ಬಂದು ನಿಂತು ತನ್ನ ದೇವರಾದ ಯೆಹೋವನ ಹೆಸರು ಹೇಳಿ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:11
19 ತಿಳಿವುಗಳ ಹೋಲಿಕೆ  

ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಯೇಸು ಅವನಿಗೆ, “ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ,” ಎಂದರು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.


ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು.


ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ಎಲೀಷನು ಅವನಿಗೆ, “ಹೋಗಿ ಜೋರ್ಡನ್ ನದಿಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹ ಮೊದಲಿದ್ದಂತಾಗುವುದು; ನೀನು ಶುದ್ಧನಾಗುವೆ,” ಎಂದು ಹೇಳಿಕಳುಹಿಸಿದನು.


ದಮಸ್ಕದ ಅಬಾನಾ ಹಾಗು ಪರ್ಪರ್ ಎಂಬ ನದಿಗಳು ಇಸ್ರಯೇಲರ ಎಲ್ಲಾ ನದಿ ಹೊಳೆಗಳಿಗಿಂತ ಉತ್ತಮವಾಗಿವೆಯಲ್ಲವೇ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಿತ್ತಲ್ಲವೇ?” ಎಂದು ಹೇಳಿ, ಬಹಳ ಸಿಟ್ಟಿನಿಂದ ಹೊರಟುಹೋದನು.


ಆಕೆ ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು