Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:22 - ಕನ್ನಡ ಸತ್ಯವೇದವು C.L. Bible (BSI)

22 ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು - ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದದರಿಂದ ಅವರಿಗೋಸ್ಕರ ಬೇಗನೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತುಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬದಾಗಿ ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಗೇಹಜಿಯು, “ಹೌದು, ಎಲ್ಲವೂ ಕ್ಷೇಮವಾಗಿದೆ. ನನ್ನ ಒಡೆಯನಾದ ಎಲೀಷನು ನನಗೆ, ‘ನೋಡು, ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಪ್ರವಾದಿಗಳ ಗುಂಪಿನಿಂದ ನನ್ನ ಬಳಿಗೆ ಇಬ್ಬರು ತರುಣರು ಬಂದಿದ್ದಾರೆ. ದಯವಿಟ್ಟು ಅವರಿಗೆ ಮೂವತ್ತೈದು ಕಿಲೋ.ಗ್ರಾಂ. ಬೆಳ್ಳಿಯನ್ನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ಬಾ’ ಎಂದು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:22
21 ತಿಳಿವುಗಳ ಹೋಲಿಕೆ  

ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು;


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.


ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.


ಅರಸನು ಹಾದುಹೋಗುವಾಗ ಅವನಿಗೆ, “ನಿಮ್ಮ ಸೇವಕನಾದ ನಾನು ಯುದ್ಧಕ್ಕೆ ಹೋಗಿದ್ದಾಗ ರಣರಂಗದಲ್ಲಿ ಒಬ್ಬನು, ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ನಿನ್ನ ಪ್ರಾಣವು ನನ್ನದಾಗಿರುವುದು; ಇಲ್ಲವೆ ನೀನು ನನಗೆ ಮೂರು ಸಾವಿರ ಬೆಳ್ಳಿನಾಣ್ಯವನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಡಿಸಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷ ವಸ್ತ್ರಗಳನ್ನೂ ಕೊಡುತ್ತೇನೆ.


“ಅಗೋ, ಅಲ್ಲಿ ಶೂನೇಮ್ಯಳು; ನೀನು ಓಡಿಹೋಗಿ ಆಕೆಯನ್ನು ಭೇಟಿಯಾಗು; ‘ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ?’ ಎಂದು ವಿಚಾರಿಸು,” ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆ ಆ ಸೇವಕನಿಗೆ, “ಕ್ಷೇಮ,” ಎಂದು ಉತ್ತರಕೊಟ್ಟು, ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು.


ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು, ರಥದಿಂದಿಳಿದು, ಅವನನ್ನು ಎದುರುಗೊಂಡನು, “ಕ್ಷೇಮವೇ,” ಎಂದು ಕೇಳಿದನು.


ಅವರು ಹೋದನಂತರ, ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದು ಕೇಳಿದನು. ಅದಕ್ಕೆ ಅವನು, “ನಿಮ್ಮ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ,” ಎಂದು ಉತ್ತರಕೊಟ್ಟನು.


ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.


ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು